ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ “ಒಂದಾನೊಂದು ಕಾಲದಲ್ಲಿ” ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್ ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್ ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್ ಅಭಿನಯಿಸಿರುವ “ಒಂದು ಮುತ್ತಿನ ಕಥೆ” ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು.

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.