ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ “ಒಂದಾನೊಂದು ಕಾಲದಲ್ಲಿ” ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್ ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್ ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್ ಅಭಿನಯಿಸಿರುವ “ಒಂದು ಮುತ್ತಿನ ಕಥೆ” ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು.

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…