ಸುದ್ದಿ

ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

103

ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ  “ಒಂದಾನೊಂದು ಕಾಲದಲ್ಲಿ”  ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರ‍ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್  ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್  ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್  ಅಭಿನಯಿಸಿರುವ “ಒಂದು ಮುತ್ತಿನ ಕಥೆ”  ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು. 

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.