News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

106

ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ  “ಒಂದಾನೊಂದು ಕಾಲದಲ್ಲಿ”  ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರ‍ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್  ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್  ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್  ಅಭಿನಯಿಸಿರುವ “ಒಂದು ಮುತ್ತಿನ ಕಥೆ”  ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು. 

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸಂಬಂಧ

    ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

    ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…