News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

106

ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ  “ಒಂದಾನೊಂದು ಕಾಲದಲ್ಲಿ”  ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರ‍ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್  ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್  ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್  ಅಭಿನಯಿಸಿರುವ “ಒಂದು ಮುತ್ತಿನ ಕಥೆ”  ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು. 

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…