ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ.

ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ ಪ್ರತಾಪ್ ಐವರು ಲಿವಿಂಗ್ ಏರಿಯಾದಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಶೈನ್, ಸ್ನಾನ ಆದ ನಂತರ ಬಾತ್ರೂಮ್ನಿಂದ ಬಟ್ಟೆ ತೆಗೆದುಕೊಂಡು ಬರುವ ಅಭ್ಯಾಸವೇ ಇಲ್ಲವೇ ಎಂದು ಭೂಮಿಯನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಭೂಮಿ, ಯಾವತ್ತಾದ್ರೂ ಈ ರೀತಿ ಆಗಿದೆಯಾ. ಏನೋ ಗಡಿಬಿಡಿಯಲಿ ಮರೆತೆ. ಅದನ್ನ ಹೈ-ಲೈಟ್ ಮಾಡಬೇಡ ಎಂದು ಕೋಪದಿಂದ ಹೇಳಿದರು. ಆಗ ಗರಂ ಆದ ಶೈನ್, ಹೈ-ಲೈಟ್ ಮಾಡೋದಾ. ಇಲ್ಲಿವರೆಗೂ ನಾನು ಎಲ್ಲಿ ಹೇಳಿದ್ದೀನಿ. ನೀನು ಮತ್ತು ಕಿಶನ್ ಒಂದೇ ರೀತಿ ಹೇಳುತ್ತೀರಾ. ನಾನು ದೀಪಿಕಾಗೆ ನಿಮ್ಮ ಬಟ್ಟೆನಾ ಎಂದು ಕೇಳಿದ್ದೆ. ಅದಾನಂತರ ಈಗಲೇ ಮೊದಲ ಬಾರಿಗೆ ನಿನಗೆ ಹೇಳಿದ್ದು. ಇದರಲ್ಲಿ ಹೈ-ಲೈಟ್ ಮಾಡಿ ನನಗೆ ಏನು ಸಿಗಬೇಕಿಲ್ಲ ಎಂದು ರೇಗಾಡಿದರು.

ಅದಕ್ಕೆ ಭೂಮಿಯೂ ಗರಂ ಆಗಿ, ನೀನು ಮೊದಲೂ ಹೇಳಿದ್ದೀಯಾ, ನಾನು ತಪ್ಪು ಮಾಡಿದ್ರೆ ಒಪ್ಪಿಕೊಳ್ಳುತ್ತಿದ್ದೆ. ಆದರೆ ನೀನು ನನಗೆ ಹೇಳಿದಿಯಾ. ಅದನ್ನು ಒಪ್ಪಿಕೋ ಎಂದಿದ್ದಾರೆ. ಆಗ ಶೈನ್ ಯಾವಾಗ ಹೇಳಿದ್ದೆ? ಯಾರಿಗೆ ಹೇಳಿದ್ದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ರೀತಿ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಕೊನೆಗೆ ಇಬ್ಬರೂ ಮಾತನಾಡದೇ ಸುಮ್ಮನಾಗಿದ್ದಾರೆ. ಇದರಿಂದ ಬೇಸರಗೊಂಡ ಶೈನ್ ಹೊರಗಡೆ ಕುಳಿತಿದ್ದರು. ಆಗ ದೀಪಿಕಾ ಬಂದು ಸಮಾಧಾನ ಮಾಡಲು ಪ್ರಯತ್ನ ಮಾಡಿದ್ದಾರೆ.

ನಾವು ಯಾರ ಜೊತೆನೂ ಕ್ಲೋಸ್ ಆಗಬಾರದು. ಅದರಿಂದ ಸಲುಗೆ ಬೆಳೆಯುತ್ತದೆ. ಆದರೆ ನಾನು ತಮಾಷೆಗೆ ಹೇಳಿದ್ದು, ಹೈ-ಲೈಟ್ ಮಾಡಬೇಡಿ ಎಂದಿದ್ದಕ್ಕೆ ಬೇಸರವಾಯಿತು. ಅವರ ಬಟ್ಟೆ ಅಲ್ಲಿದೆ ಎಂದು ಹೇಳಿದರೆ ನನಗೆ ಏನು ಸಿಗುತ್ತದೆ. ನಿಜಾ ಹೈ-ಲೈಟ್ ಮಾಡಬೇಡಿ ಎಂದಾಗ ತುಂಬಾ ಬೇಸರವಾಯಿತು. ಭೂಮಿ ಬಟ್ಟೆ ಅಲ್ಲಿದೆ-ಇಲ್ಲಿದೆ ಎಂದು ಹೇಳಿದರೆ ನನಗೆ ಏನಾಗುತ್ತೆ. ಭೂಮಿ ಆಗಿದ್ದಕ್ಕೆ ಹೇಳಿದ್ದು, ಬೇರೆ ಯಾರಾಗಿದ್ದರೂ ಹೇಳುತ್ತಿರಲಿಲ್ಲ ಎಂದು ಬೇಸರದಿಂದ ಮಾತನಾಡಿದ್ದಾರೆ.
ಕೊನೆಗೆ ದೀಪಿಕಾ ಇರುವುದು ಇನ್ನೂ ಮೂರು ದಿನ ಇಬ್ಬರೂ ಕೋಪ ಮಾಡಿಕೊಳ್ಳಬೇಡಿ ಎಂದು ಸಮಾಧಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.