ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.
ದೇವಾಲಯದ ಇತಿಹಾಸ ಮತ್ತು ವಿಶೇಷತೆ! :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.
ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.
ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ. ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ, ಈ ಗುಹೆಯ ಒಳಗೆ ಏಳು ಶಿವಲಿಂಗ ಇದೆ. ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ ಮಹಿಮೆ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…