News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

160

ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ!   :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ‌ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ‌ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ‌ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ‌ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ.‌ ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ‌ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ‌ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ,          ಈ‌ ಗುಹೆಯ ಒಳಗೆ ಏಳು ಶಿವಲಿಂಗ ಇದೆ.‌ ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ‌ ಮಹಿಮೆ‌ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…