ಸುದ್ದಿ

ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

154

ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ!   :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ‌ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ‌ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ‌ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ‌ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ.‌ ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ‌ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ‌ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ,          ಈ‌ ಗುಹೆಯ ಒಳಗೆ ಏಳು ಶಿವಲಿಂಗ ಇದೆ.‌ ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ‌ ಮಹಿಮೆ‌ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…