ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ ಎಂದರು.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ಆದರೆ ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆ.ಹೆಚ್ ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರ ಕ್ಷೇತ್ರದ ಜನತೆ ಕೂಡ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…