News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

44

ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ. ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ ಎಂದರು.

ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ಆದರೆ ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ. ಆದರೆ ಹೈಕಮಾಂಡ್‌ ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ.  ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್‌ ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆ.ಹೆಚ್‌ ಮುನಿಯಪ್ಪ ಅವರ ಆದಿಯಾಗಿ ಕೋಲಾರ ಜಿಲ್ಲೆಯ ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ನನಗೆ ಒತ್ತಾಯ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೋಲಾರಕ್ಕೆ ಬಂದು ದೇವಾಲಯಗಳಿಗೆ, ಮಸೀದಿಗಳಿಗೆ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ ಪ್ರಾರ್ಥನೆ ಸಲ್ಲಿಸಿ, ಎಲ್ಲಾ ಧರ್ಮಗುರುಗಳೊಂದಿಗೆ ಮಾತನಾಡಿದ್ದೇನೆ, ಅವರೆಲ್ಲರೂ ನೀವು ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರ ಕ್ಷೇತ್ರದ ಜನತೆ ಕೂಡ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಪ್ರೀತಿಯಿಂದ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಕರ್ನಾಟಕದ ಸಾಧಕರು

    ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

    ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…