ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…