ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನೋಡೋಣ:

ಶೀತಾಘಾತದ ಲಕ್ಷಣಗಳು ಇವು ಸಾಮಾನ್ಯವಾಗಿ ಬಿಸಿಲಿನ ಆಘಾತಕ್ಕೆ ಒಳಗಾದ ತ್ವಚೆಯ ಪರಿಣಾಮದಂತೆಯೇ ಇರುತ್ತದೆ. ವಿಶೇಷವಾಗಿ ಮುಖದ ತ್ವಚೆ ಕೆಂಪಗಾಗಿ ಮುಟ್ಟಲೂ ಆಗದಷ್ಟು ಸೂಕ್ಷ್ಮ ಸಂವೇದಿಯಾಗುತ್ತದೆ. ಅಲ್ಲದೇ ಚರ್ಮ ಉರಿಯುತ್ತಿರುವಂತೆ ಭಾಸವಾಗಬಹುದು. ಕೆಂಪಗಾಗಿರುವುದು ಇಳಿಯುತ್ತಿದ್ದಂತೆಯೇ ಹೊರಚರ್ಮ ಒಣಗಿ ಪಕಳೆಯೇಳಲು ತೊಡಗಬಹುದು. ಈ ಲಕ್ಷಣಗಳು ಬಿಸಿಲಿನ ಆಘಾತದ ಲಕ್ಷಣಗಳನ್ನೇ ಹೋಲುತ್ತಿದ್ದರೂ ಅದಕ್ಕೂ ಹೆಚ್ಚು ಒಣಗುತ್ತದೆ ಮತ್ತು ಬಿಗಿಯಾಗಿರುತ್ತದೆ.

ಶೀತಾಘಾತಕ್ಕೆ ಪರಿಹಾರಗಳು ಶೀತಾಘಾತಕ್ಕೆ ಚಿಕಿತ್ಸೆಯು ನಿಮ್ಮ ಚರ್ಮದ ತೇವಾಂಶವನ್ನು ಪುನಃ ತುಂಬಿಸುವುದರ ಜೊತೆಗೆ ಈಗಾಗಲೇ ಇರುವ ಯಾವುದೇ ನೋವನ್ನೂ ಇಲ್ಲವಾಗಿಸುತ್ತದೆ. * ಐಬುಪ್ರೊಫೇನ್ ನಂತಹ ಅತಿಯಾದ ನೋವು ನಿವಾರಕವು ಸೌಮ್ಯ ನೋವು ಮತ್ತು ಊತವನ್ನು ಕಡಿಮೆ ಮಾಡುತ್ತದೆ. * ಉಗುರುಬೆಚ್ಚನೆಯ ನೀರು ಸಹ ಸುಡುವಿಕೆಯನ್ನು ಕಡಿಮೆ ಮಾಡುತ್ತದೆ. ನೀವು ಶೀತಾಘಾತದಿಂದ ಚೇತರಿಸಿಕೊಳ್ಳುತ್ತಿರುವಾಗ ಬಿಸಿನೀರನ್ನು ಬಳಸದಿರಿ. ಇದು ಚರ್ಮದಿಂದ ಇನ್ನಷ್ಟು ತೇವಾಂಶವನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚೇತರಿಕೆಯ ಸಮಯವನ್ನು ಇನ್ನಷ್ಟು ವಿಸ್ತರಿಸುತ್ತದೆ. * ನಿಮ್ಮ ಚರ್ಮದ ತೇವಾಂಶವನ್ನು ಮರುತುಂಬಿಸುವುದು ನೋವು ನಿವಾರಣೆ ಮಾಡುವುದು ಮತ್ತು ಒಟ್ಟಾರೆ ಚೇತರಿಕೆ ಎರಡರಲ್ಲೂ ಮುಖ್ಯವಾಗಿದೆ. ಈಗಲೂ ನೀವು ನಿಮ್ಮ ಮುಖ ಮತ್ತು ದೇಹವನ್ನು ಸ್ವಚ್ಛಗೊಳಿಸಬಹುದು, ಆದರೆ ಕೆನೆಯಾಧಾರಿತ ಕ್ಲೆನ್ಸರ್ ಮೂಲಕ ಸ್ವಚ್ಛಗೊಳಿಸುತ್ತಿದ್ದರೆ ಮಾತ್ರ. ಜೆಲ್ ಮತ್ತು ನೀರು ಆಧಾರಿತ ಕ್ಲೆನ್ಸರ್ ಬಳಕೆಯಿಂದ ಶೀತಾಘಾತಕ್ಕೆ ಒಳಗಾದ ತ್ವಚೆ ಇನ್ನಷ್ಟು ಒಣಗಬಹುದು. * ನಿಮ್ಮ ಚರ್ಮವು ಚೇತರಿಸಿಕೊಳ್ಳುವಾಗ ಅಗತ್ಯಕ್ಕೆ ತಕ್ಕಂತೆ ದಿನವಿಡೀ ತೇವಕಾರಕ ಅಥವಾ ಮಾಯಿಶ್ಚರೈಸರ್ ಅನ್ನು ಹಚ್ಚಿಕೊಳ್ಳಿ. ನೀವು ದಪ್ಪ ಲೋಷನ್ ಬಳಸುತ್ತಿದ್ದರೆ, ನೀವು ಇದನ್ನು ದಿನಕ್ಕೆ ನಾಲ್ಕು ಬಾರಿ ಬಳಸಬಹುದು. ನಿಮ್ಮ ಚರ್ಮವು ಸಂಪೂರ್ಣವಾಗಿ ಗುಣವಾಗುವವರೆಗೆ ಯಾವುದೇ ಹೊರಚರ್ಮ ನಿವಾರಕ (ಎಕ್ಸ್ಫೋಲಿಯಂಟ್), ಟೋನರ್ ಗಳು ಮತ್ತು ಸಂಕೋಚಕಗಳ ಬಳಕೆಯನ್ನು ತಪ್ಪಿಸಿ. * ಚೇತರಿಕೆಯ ಸಮಯದಲ್ಲಿ ಆದಷ್ಟೂ ಹೊರಾಂಗಣದಲ್ಲಿ ನಿಮ್ಮ ಸಮಯವನ್ನು ಮಿತಿಗೊಳಿಸಲು ಯತ್ನಿಸಿ. ನಿಮ್ಮ ಚರ್ಮವು ಇನ್ನಷ್ಟು ಒಣಗದಂತೆ ತಡೆಯಲು ನೀವು ಆರ್ದ್ರಕವನ್ನು ಬಳಸಿ. * ಅಂತಿಮವಾಗಿ, ನೀವು ಸಾಕಷ್ಟು ನೀರು ಕುಡಿಯುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ನಿಮಗೆ ಅತಿಯಾದ ಬಾಯಾರಿಕೆಯಿಲ್ಲದಿದ್ದರೂ, ಶೀತಾಘಾತ ನಿಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸುತ್ತದೆ. ದೇಹದ ಒಳಗಿನಿಂದ ತೇವಾಂಶವನ್ನು ಮರುತುಂಬಿಸಲು ನೀರು ಕುಡಿಯುವುದು ಒಂದು ಉತ್ತಮ ಮಾರ್ಗವಾಗಿದೆ.

ಶೀತಾಘಾತಕ್ಕೆ ಒಳಗಾದ ತುಟಿಗಳು ಬಾಯಿಯನ್ನು ತೆರೆಯುವಾಗ ಅತಿ ಹೆಚ್ಚು ವಿಸ್ತಾರಗೊಳ್ಳಬೇಕಾದ ಅವಶ್ಯಕತೆ ಇರುವ ಕಾರಣ ತುಟಿಯ ಹೊರಚರ್ಮ ಅತಿ ಹೆಚ್ಚು ವಿಸ್ತಾರ ಹೊಂದಿದ್ದು ಸಾಮಾನ್ಯ ಸ್ಥಿತಿಯಲ್ಲಿ ನೆರಿಗೆಯಾಗಿರುತ್ತದೆ ಹಾಗೂ ಅತಿ ತೆಳುವೂ ಆಗಿರುತ್ತದೆ. ಅಲ್ಲದೇ ತುಟಿಗಳನ್ನು ಮುಚ್ಚಿಕೊಳ್ಳುವುದು ಹೆಚ್ಚೂ ಕಡಿಮೆ ಅಸಾಧ್ಯವಾದುದರಿಂದ ಶೀತಾಘಾತದ ಪ್ರಭಾವಕ್ಕೆ ಅತಿ ಸುಲಭವಾಗಿ ಒಳಗಾಗುತ್ತದೆ. ಒಂದು ವೇಳೆ ತುಟಿಗಳಿಗೆ ಹೆಚ್ಚು ಆಘಾತ ಎದುರಾಗಿದ್ದರೆ ಹೀಗೆ ಮಾಡಿ: * ಅತಿ ಹೆಚ್ಚು ನೀರು ಕುಡಿಯಿರಿ * ಬಿಸಿ ಆಹಾರ/ ಪಾನೀಯಗಳನ್ನು ಸೇವಿಸದಿರಿ * ಖಾರದ ಆಹಾರಗಳನ್ನೂ ಸೇವಿಸದಿರಿ. * ಒಂದು ವೇಳೆ ತುಟಿಗಳ ಚರ್ಮ ಪಕಳೆಯೇಳುತ್ತಿದ್ದರೆ, ಇದನ್ನು ಸರ್ವಥಾ ಕೀಳಲು ಯತ್ನಿಸದಿರಿ. ಇವು ತಾವಾಗಿಯೇ ಉದುರಲಿ ತುಟಿಗೆ ಹಚ್ಚುವ ತೇವಕಾರಕವನ್ನು * ಸದಾ ಬಳಿಯೇ ಇರಿಸಿ ಆಗಾಗ ಹಚ್ಚಿಕೊಳ್ಳುತ್ತಾ ಇರಿ. ಹೆಚ್ಚಿನ ರಕ್ಷಣೆಗಾಗಿ ಎಮೋಲ್ಲಿಯೆಂಟ್ ಕ್ರೀಮ್ ಅಥವಾ ವ್ಯಾಸೆಲಿನ್ ಹಚ್ಚಿಕೊಳ್ಳಿ. * ನಿಮ್ಮ ಲಿಪ್ ಬಾಮ್ 15 ಎಸ್ಪಿಎಫ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಶೀತಾಘಾತದಿಂದ ತಡೆಯಲು ಅತ್ಯುತ್ತಮ ಮಾರ್ಗವೆಂದರೆ ಹೊರಗೆ ಹೋಗದೇ ಇರುವುದು, ಆದರೆ ಇದು ಸಾಧ್ಯವಲ್ಲದ ವಿಷಯ. ಹಾಗಾಗಿ, ಶೀತಲ ಮಾರುತದ ಸಮಯದಲ್ಲಿ ಹೊರಹೋಗಬೇಕಾದಾಗ ಈ ಕ್ರಮಗಳನ್ನು ಅನುಸರಿಸಿ: * ನಿಮ್ಮ ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಳ್ಳಿ * ತಂಪು ಕನ್ನಡಕ ಧರಿಸಿ * ಟೋಪಿ ಮತ್ತು ಕೈಗವಸುಗಳನ್ನು ಬಳಸಿ * ಉದ್ದನೆಯ ತೋಳಿರುವ ಅಂಗಿ ಮತ್ತು ಪ್ಯಾಂಟ್ ಧರಿಸಿ * ಎರಡು ಅಥವಾ ಹೆಚ್ಚಿನ ಉಡುಪುಗಳನ್ನು ತೊಟ್ಟು ಬೆಚ್ಚಗಿರಿ * ಶೀತಾಘಾತ ಉಂಟಾಗುವ ಸ್ಥಿತಿಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ, ನೀವು ಯಾವಾಗಲೂ ಸನ್ಸ್ಕ್ರೀನ್ ಧರಿಸಬೇಕು. ಕನಿಷ್ಠ 30 ಎಸ್ಪಿಎಫ್ ಹೊಂದಿರುವ ವಿಶಾಲ-ಸ್ಪೆಕ್ಟ್ರಮ್ ಇರುವ ಉತ್ಪನ್ನವನ್ನೇ ಆಯ್ದುಕೊಳ್ಳಿ. ಶೀತಾಘಾತದ ಹಿಂದಿನ ವಿದ್ಯಮಾನಗಳು ಸುಮಾರು ಒಂದು ಶತಮಾನದಿಂದ ಚರ್ಮದ ತಜ್ಞರ ನಡುವೆ ಚರ್ಚೆಗೆ ಕಾರಣವಾಗಿವೆ, ಆದರೆ ಒಂದು ವಿಷಯ ಖಚಿತವಾಗಿದೆ: ಶೀತ ಮತ್ತು ಶುಷ್ಕ ದಿನದಂದು ಸಹ ಹೊರಗಡೆ ಇರುವುದು ನಿಮ್ಮ ಚರ್ಮವನ್ನು ಸುಡಲು ಕಾರಣವಾಗಬಹುದು. ಪ್ರತಿದಿನ ನಿಮ್ಮ ಚರ್ಮವನ್ನು ಸೂರ್ಯ ಮತ್ತು ಇತರ ಅಂಶಗಳಿಂದ ರಕ್ಷಿಸುವುದು ಮುಖ್ಯ. ಕೆಲವು ದಿನಗಳ ನಂತರ ಶೀತಾಘಾತ ಅಥವಾ ಬಿಸಿಲಿನ ಲಕ್ಷಣಗಳು ಮುಂದುವರಿದರೆ ಅಥವಾ ಅವು ಉಲ್ಬಣಗೊಂಡರೆ ನಿಮ್ಮ ವೈದ್ಯರನ್ನು ಭೇಟಿ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…