ಸುದ್ದಿ

ಚಳಿಗಾಲದಲ್ಲಿ ಚರ್ಮದ ಕಾಳಜಿಯನ್ನು ಎಂದಿಗೂ ನಿರ್ಲಕ್ಷಿಸಬಾರದು,ಯಾಕೆ ಗೊತ್ತಾ,?

43

ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ  ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನೋಡೋಣ:

ಶೀತಾಘಾತದ ಲಕ್ಷಣಗಳು ಇವು ಸಾಮಾನ್ಯವಾಗಿ ಬಿಸಿಲಿನ ಆಘಾತಕ್ಕೆ ಒಳಗಾದ ತ್ವಚೆಯ ಪರಿಣಾಮದಂತೆಯೇ ಇರುತ್ತದೆ. ವಿಶೇಷವಾಗಿ ಮುಖದ ತ್ವಚೆ ಕೆಂಪಗಾಗಿ ಮುಟ್ಟಲೂ ಆಗದಷ್ಟು ಸೂಕ್ಷ್ಮ ಸಂವೇದಿಯಾಗುತ್ತದೆ. ಅಲ್ಲದೇ ಚರ್ಮ ಉರಿಯುತ್ತಿರುವಂತೆ ಭಾಸವಾಗಬಹುದು. ಕೆಂಪಗಾಗಿರುವುದು ಇಳಿಯುತ್ತಿದ್ದಂತೆಯೇ ಹೊರಚರ್ಮ ಒಣಗಿ ಪಕಳೆಯೇಳಲು ತೊಡಗಬಹುದು. ಈ ಲಕ್ಷಣಗಳು ಬಿಸಿಲಿನ ಆಘಾತದ ಲಕ್ಷಣಗಳನ್ನೇ ಹೋಲುತ್ತಿದ್ದರೂ ಅದಕ್ಕೂ ಹೆಚ್ಚು ಒಣಗುತ್ತದೆ ಮತ್ತು ಬಿಗಿಯಾಗಿರುತ್ತದೆ.

ಶೀತಾಘಾತಕ್ಕೆ ಪರಿಹಾರಗಳು ಶೀತಾಘಾತಕ್ಕೆ ಚಿಕಿತ್ಸೆಯು ನಿಮ್ಮ ಚರ್ಮದ ತೇವಾಂಶವನ್ನು ಪುನಃ ತುಂಬಿಸುವುದರ ಜೊತೆಗೆ ಈಗಾಗಲೇ ಇರುವ ಯಾವುದೇ ನೋವನ್ನೂ ಇಲ್ಲವಾಗಿಸುತ್ತದೆ.                           * ಐಬುಪ್ರೊಫೇನ್ ನಂತಹ ಅತಿಯಾದ ನೋವು ನಿವಾರಕವು ಸೌಮ್ಯ ನೋವು ಮತ್ತು ಊತವನ್ನು ಕಡಿಮೆ ಮಾಡುತ್ತದೆ. * ಉಗುರುಬೆಚ್ಚನೆಯ ನೀರು ಸಹ ಸುಡುವಿಕೆಯನ್ನು ಕಡಿಮೆ ಮಾಡುತ್ತದೆ. ನೀವು ಶೀತಾಘಾತದಿಂದ ಚೇತರಿಸಿಕೊಳ್ಳುತ್ತಿರುವಾಗ ಬಿಸಿನೀರನ್ನು ಬಳಸದಿರಿ. ಇದು ಚರ್ಮದಿಂದ ಇನ್ನಷ್ಟು ತೇವಾಂಶವನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚೇತರಿಕೆಯ ಸಮಯವನ್ನು ಇನ್ನಷ್ಟು ವಿಸ್ತರಿಸುತ್ತದೆ. * ನಿಮ್ಮ ಚರ್ಮದ ತೇವಾಂಶವನ್ನು ಮರುತುಂಬಿಸುವುದು ನೋವು ನಿವಾರಣೆ ಮಾಡುವುದು ಮತ್ತು ಒಟ್ಟಾರೆ ಚೇತರಿಕೆ ಎರಡರಲ್ಲೂ ಮುಖ್ಯವಾಗಿದೆ. ಈಗಲೂ ನೀವು ನಿಮ್ಮ ಮುಖ ಮತ್ತು ದೇಹವನ್ನು ಸ್ವಚ್ಛಗೊಳಿಸಬಹುದು, ಆದರೆ ಕೆನೆಯಾಧಾರಿತ ಕ್ಲೆನ್ಸರ್ ಮೂಲಕ ಸ್ವಚ್ಛಗೊಳಿಸುತ್ತಿದ್ದರೆ ಮಾತ್ರ. ಜೆಲ್ ಮತ್ತು ನೀರು ಆಧಾರಿತ ಕ್ಲೆನ್ಸರ್ ಬಳಕೆಯಿಂದ ಶೀತಾಘಾತಕ್ಕೆ ಒಳಗಾದ ತ್ವಚೆ ಇನ್ನಷ್ಟು ಒಣಗಬಹುದು. * ನಿಮ್ಮ ಚರ್ಮವು ಚೇತರಿಸಿಕೊಳ್ಳುವಾಗ ಅಗತ್ಯಕ್ಕೆ ತಕ್ಕಂತೆ ದಿನವಿಡೀ ತೇವಕಾರಕ ಅಥವಾ ಮಾಯಿಶ್ಚರೈಸರ್ ಅನ್ನು ಹಚ್ಚಿಕೊಳ್ಳಿ. ನೀವು ದಪ್ಪ ಲೋಷನ್ ಬಳಸುತ್ತಿದ್ದರೆ, ನೀವು ಇದನ್ನು ದಿನಕ್ಕೆ ನಾಲ್ಕು ಬಾರಿ ಬಳಸಬಹುದು. ನಿಮ್ಮ ಚರ್ಮವು ಸಂಪೂರ್ಣವಾಗಿ ಗುಣವಾಗುವವರೆಗೆ ಯಾವುದೇ ಹೊರಚರ್ಮ ನಿವಾರಕ (ಎಕ್ಸ್‌ಫೋಲಿಯಂಟ್), ಟೋನರ್ ಗಳು ಮತ್ತು ಸಂಕೋಚಕಗಳ ಬಳಕೆಯನ್ನು ತಪ್ಪಿಸಿ. * ಚೇತರಿಕೆಯ ಸಮಯದಲ್ಲಿ ಆದಷ್ಟೂ ಹೊರಾಂಗಣದಲ್ಲಿ ನಿಮ್ಮ ಸಮಯವನ್ನು ಮಿತಿಗೊಳಿಸಲು ಯತ್ನಿಸಿ. ನಿಮ್ಮ ಚರ್ಮವು ಇನ್ನಷ್ಟು ಒಣಗದಂತೆ ತಡೆಯಲು ನೀವು ಆರ್ದ್ರಕವನ್ನು ಬಳಸಿ. * ಅಂತಿಮವಾಗಿ, ನೀವು ಸಾಕಷ್ಟು ನೀರು ಕುಡಿಯುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ನಿಮಗೆ ಅತಿಯಾದ ಬಾಯಾರಿಕೆಯಿಲ್ಲದಿದ್ದರೂ, ಶೀತಾಘಾತ ನಿಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸುತ್ತದೆ. ದೇಹದ ಒಳಗಿನಿಂದ ತೇವಾಂಶವನ್ನು ಮರುತುಂಬಿಸಲು ನೀರು ಕುಡಿಯುವುದು ಒಂದು ಉತ್ತಮ ಮಾರ್ಗವಾಗಿದೆ.

ಶೀತಾಘಾತಕ್ಕೆ ಒಳಗಾದ ತುಟಿಗಳು ಬಾಯಿಯನ್ನು ತೆರೆಯುವಾಗ ಅತಿ ಹೆಚ್ಚು ವಿಸ್ತಾರಗೊಳ್ಳಬೇಕಾದ ಅವಶ್ಯಕತೆ ಇರುವ ಕಾರಣ ತುಟಿಯ ಹೊರಚರ್ಮ ಅತಿ ಹೆಚ್ಚು ವಿಸ್ತಾರ ಹೊಂದಿದ್ದು ಸಾಮಾನ್ಯ ಸ್ಥಿತಿಯಲ್ಲಿ ನೆರಿಗೆಯಾಗಿರುತ್ತದೆ ಹಾಗೂ ಅತಿ ತೆಳುವೂ ಆಗಿರುತ್ತದೆ. ಅಲ್ಲದೇ ತುಟಿಗಳನ್ನು ಮುಚ್ಚಿಕೊಳ್ಳುವುದು ಹೆಚ್ಚೂ ಕಡಿಮೆ ಅಸಾಧ್ಯವಾದುದರಿಂದ ಶೀತಾಘಾತದ ಪ್ರಭಾವಕ್ಕೆ ಅತಿ ಸುಲಭವಾಗಿ ಒಳಗಾಗುತ್ತದೆ. ಒಂದು ವೇಳೆ ತುಟಿಗಳಿಗೆ ಹೆಚ್ಚು ಆಘಾತ ಎದುರಾಗಿದ್ದರೆ ಹೀಗೆ ಮಾಡಿ: * ಅತಿ ಹೆಚ್ಚು ನೀರು ಕುಡಿಯಿರಿ * ಬಿಸಿ ಆಹಾರ/ ಪಾನೀಯಗಳನ್ನು ಸೇವಿಸದಿರಿ * ಖಾರದ ಆಹಾರಗಳನ್ನೂ ಸೇವಿಸದಿರಿ. * ಒಂದು ವೇಳೆ ತುಟಿಗಳ ಚರ್ಮ ಪಕಳೆಯೇಳುತ್ತಿದ್ದರೆ, ಇದನ್ನು ಸರ್ವಥಾ ಕೀಳಲು ಯತ್ನಿಸದಿರಿ. ಇವು ತಾವಾಗಿಯೇ ಉದುರಲಿ ತುಟಿಗೆ ಹಚ್ಚುವ ತೇವಕಾರಕವನ್ನು * ಸದಾ ಬಳಿಯೇ ಇರಿಸಿ ಆಗಾಗ ಹಚ್ಚಿಕೊಳ್ಳುತ್ತಾ ಇರಿ. ಹೆಚ್ಚಿನ ರಕ್ಷಣೆಗಾಗಿ ಎಮೋಲ್ಲಿಯೆಂಟ್ ಕ್ರೀಮ್ ಅಥವಾ ವ್ಯಾಸೆಲಿನ್ ಹಚ್ಚಿಕೊಳ್ಳಿ. * ನಿಮ್ಮ ಲಿಪ್ ಬಾಮ್ 15 ಎಸ್‌ಪಿಎಫ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಶೀತಾಘಾತದಿಂದ ತಡೆಯಲು ಅತ್ಯುತ್ತಮ ಮಾರ್ಗವೆಂದರೆ ಹೊರಗೆ ಹೋಗದೇ ಇರುವುದು, ಆದರೆ ಇದು ಸಾಧ್ಯವಲ್ಲದ ವಿಷಯ. ಹಾಗಾಗಿ, ಶೀತಲ ಮಾರುತದ ಸಮಯದಲ್ಲಿ ಹೊರಹೋಗಬೇಕಾದಾಗ ಈ ಕ್ರಮಗಳನ್ನು ಅನುಸರಿಸಿ: * ನಿಮ್ಮ ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಳ್ಳಿ * ತಂಪು ಕನ್ನಡಕ ಧರಿಸಿ * ಟೋಪಿ ಮತ್ತು ಕೈಗವಸುಗಳನ್ನು ಬಳಸಿ * ಉದ್ದನೆಯ ತೋಳಿರುವ ಅಂಗಿ ಮತ್ತು ಪ್ಯಾಂಟ್ ಧರಿಸಿ * ಎರಡು ಅಥವಾ ಹೆಚ್ಚಿನ ಉಡುಪುಗಳನ್ನು ತೊಟ್ಟು ಬೆಚ್ಚಗಿರಿ * ಶೀತಾಘಾತ ಉಂಟಾಗುವ ಸ್ಥಿತಿಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ, ನೀವು ಯಾವಾಗಲೂ ಸನ್‌ಸ್ಕ್ರೀನ್ ಧರಿಸಬೇಕು. ಕನಿಷ್ಠ 30 ಎಸ್‌ಪಿಎಫ್ ಹೊಂದಿರುವ ವಿಶಾಲ-ಸ್ಪೆಕ್ಟ್ರಮ್ ಇರುವ ಉತ್ಪನ್ನವನ್ನೇ ಆಯ್ದುಕೊಳ್ಳಿ. ಶೀತಾಘಾತದ ಹಿಂದಿನ ವಿದ್ಯಮಾನಗಳು ಸುಮಾರು ಒಂದು ಶತಮಾನದಿಂದ ಚರ್ಮದ ತಜ್ಞರ ನಡುವೆ ಚರ್ಚೆಗೆ ಕಾರಣವಾಗಿವೆ, ಆದರೆ ಒಂದು ವಿಷಯ ಖಚಿತವಾಗಿದೆ: ಶೀತ ಮತ್ತು ಶುಷ್ಕ ದಿನದಂದು ಸಹ ಹೊರಗಡೆ ಇರುವುದು ನಿಮ್ಮ ಚರ್ಮವನ್ನು ಸುಡಲು ಕಾರಣವಾಗಬಹುದು. ಪ್ರತಿದಿನ ನಿಮ್ಮ ಚರ್ಮವನ್ನು ಸೂರ್ಯ ಮತ್ತು ಇತರ ಅಂಶಗಳಿಂದ ರಕ್ಷಿಸುವುದು ಮುಖ್ಯ. ಕೆಲವು ದಿನಗಳ ನಂತರ ಶೀತಾಘಾತ ಅಥವಾ ಬಿಸಿಲಿನ ಲಕ್ಷಣಗಳು ಮುಂದುವರಿದರೆ ಅಥವಾ ಅವು ಉಲ್ಬಣಗೊಂಡರೆ ನಿಮ್ಮ ವೈದ್ಯರನ್ನು ಭೇಟಿ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

    ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…