ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನೋಡೋಣ:
ಶೀತಾಘಾತದ ಲಕ್ಷಣಗಳು ಇವು ಸಾಮಾನ್ಯವಾಗಿ ಬಿಸಿಲಿನ ಆಘಾತಕ್ಕೆ ಒಳಗಾದ ತ್ವಚೆಯ ಪರಿಣಾಮದಂತೆಯೇ ಇರುತ್ತದೆ. ವಿಶೇಷವಾಗಿ ಮುಖದ ತ್ವಚೆ ಕೆಂಪಗಾಗಿ ಮುಟ್ಟಲೂ ಆಗದಷ್ಟು ಸೂಕ್ಷ್ಮ ಸಂವೇದಿಯಾಗುತ್ತದೆ. ಅಲ್ಲದೇ ಚರ್ಮ ಉರಿಯುತ್ತಿರುವಂತೆ ಭಾಸವಾಗಬಹುದು. ಕೆಂಪಗಾಗಿರುವುದು ಇಳಿಯುತ್ತಿದ್ದಂತೆಯೇ ಹೊರಚರ್ಮ ಒಣಗಿ ಪಕಳೆಯೇಳಲು ತೊಡಗಬಹುದು. ಈ ಲಕ್ಷಣಗಳು ಬಿಸಿಲಿನ ಆಘಾತದ ಲಕ್ಷಣಗಳನ್ನೇ ಹೋಲುತ್ತಿದ್ದರೂ ಅದಕ್ಕೂ ಹೆಚ್ಚು ಒಣಗುತ್ತದೆ ಮತ್ತು ಬಿಗಿಯಾಗಿರುತ್ತದೆ.
ಶೀತಾಘಾತಕ್ಕೆ ಪರಿಹಾರಗಳು ಶೀತಾಘಾತಕ್ಕೆ ಚಿಕಿತ್ಸೆಯು ನಿಮ್ಮ ಚರ್ಮದ ತೇವಾಂಶವನ್ನು ಪುನಃ ತುಂಬಿಸುವುದರ ಜೊತೆಗೆ ಈಗಾಗಲೇ ಇರುವ ಯಾವುದೇ ನೋವನ್ನೂ ಇಲ್ಲವಾಗಿಸುತ್ತದೆ. * ಐಬುಪ್ರೊಫೇನ್ ನಂತಹ ಅತಿಯಾದ ನೋವು ನಿವಾರಕವು ಸೌಮ್ಯ ನೋವು ಮತ್ತು ಊತವನ್ನು ಕಡಿಮೆ ಮಾಡುತ್ತದೆ. * ಉಗುರುಬೆಚ್ಚನೆಯ ನೀರು ಸಹ ಸುಡುವಿಕೆಯನ್ನು ಕಡಿಮೆ ಮಾಡುತ್ತದೆ. ನೀವು ಶೀತಾಘಾತದಿಂದ ಚೇತರಿಸಿಕೊಳ್ಳುತ್ತಿರುವಾಗ ಬಿಸಿನೀರನ್ನು ಬಳಸದಿರಿ. ಇದು ಚರ್ಮದಿಂದ ಇನ್ನಷ್ಟು ತೇವಾಂಶವನ್ನು ತೆಗೆದುಹಾಕುತ್ತದೆ ಮತ್ತು ನಿಮ್ಮ ಚೇತರಿಕೆಯ ಸಮಯವನ್ನು ಇನ್ನಷ್ಟು ವಿಸ್ತರಿಸುತ್ತದೆ. * ನಿಮ್ಮ ಚರ್ಮದ ತೇವಾಂಶವನ್ನು ಮರುತುಂಬಿಸುವುದು ನೋವು ನಿವಾರಣೆ ಮಾಡುವುದು ಮತ್ತು ಒಟ್ಟಾರೆ ಚೇತರಿಕೆ ಎರಡರಲ್ಲೂ ಮುಖ್ಯವಾಗಿದೆ. ಈಗಲೂ ನೀವು ನಿಮ್ಮ ಮುಖ ಮತ್ತು ದೇಹವನ್ನು ಸ್ವಚ್ಛಗೊಳಿಸಬಹುದು, ಆದರೆ ಕೆನೆಯಾಧಾರಿತ ಕ್ಲೆನ್ಸರ್ ಮೂಲಕ ಸ್ವಚ್ಛಗೊಳಿಸುತ್ತಿದ್ದರೆ ಮಾತ್ರ. ಜೆಲ್ ಮತ್ತು ನೀರು ಆಧಾರಿತ ಕ್ಲೆನ್ಸರ್ ಬಳಕೆಯಿಂದ ಶೀತಾಘಾತಕ್ಕೆ ಒಳಗಾದ ತ್ವಚೆ ಇನ್ನಷ್ಟು ಒಣಗಬಹುದು. * ನಿಮ್ಮ ಚರ್ಮವು ಚೇತರಿಸಿಕೊಳ್ಳುವಾಗ ಅಗತ್ಯಕ್ಕೆ ತಕ್ಕಂತೆ ದಿನವಿಡೀ ತೇವಕಾರಕ ಅಥವಾ ಮಾಯಿಶ್ಚರೈಸರ್ ಅನ್ನು ಹಚ್ಚಿಕೊಳ್ಳಿ. ನೀವು ದಪ್ಪ ಲೋಷನ್ ಬಳಸುತ್ತಿದ್ದರೆ, ನೀವು ಇದನ್ನು ದಿನಕ್ಕೆ ನಾಲ್ಕು ಬಾರಿ ಬಳಸಬಹುದು. ನಿಮ್ಮ ಚರ್ಮವು ಸಂಪೂರ್ಣವಾಗಿ ಗುಣವಾಗುವವರೆಗೆ ಯಾವುದೇ ಹೊರಚರ್ಮ ನಿವಾರಕ (ಎಕ್ಸ್ಫೋಲಿಯಂಟ್), ಟೋನರ್ ಗಳು ಮತ್ತು ಸಂಕೋಚಕಗಳ ಬಳಕೆಯನ್ನು ತಪ್ಪಿಸಿ. * ಚೇತರಿಕೆಯ ಸಮಯದಲ್ಲಿ ಆದಷ್ಟೂ ಹೊರಾಂಗಣದಲ್ಲಿ ನಿಮ್ಮ ಸಮಯವನ್ನು ಮಿತಿಗೊಳಿಸಲು ಯತ್ನಿಸಿ. ನಿಮ್ಮ ಚರ್ಮವು ಇನ್ನಷ್ಟು ಒಣಗದಂತೆ ತಡೆಯಲು ನೀವು ಆರ್ದ್ರಕವನ್ನು ಬಳಸಿ. * ಅಂತಿಮವಾಗಿ, ನೀವು ಸಾಕಷ್ಟು ನೀರು ಕುಡಿಯುತ್ತೀರಾ ಎಂದು ಖಚಿತಪಡಿಸಿಕೊಳ್ಳಿ. ನಿಮಗೆ ಅತಿಯಾದ ಬಾಯಾರಿಕೆಯಿಲ್ಲದಿದ್ದರೂ, ಶೀತಾಘಾತ ನಿಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸುತ್ತದೆ. ದೇಹದ ಒಳಗಿನಿಂದ ತೇವಾಂಶವನ್ನು ಮರುತುಂಬಿಸಲು ನೀರು ಕುಡಿಯುವುದು ಒಂದು ಉತ್ತಮ ಮಾರ್ಗವಾಗಿದೆ.
ಶೀತಾಘಾತಕ್ಕೆ ಒಳಗಾದ ತುಟಿಗಳು ಬಾಯಿಯನ್ನು ತೆರೆಯುವಾಗ ಅತಿ ಹೆಚ್ಚು ವಿಸ್ತಾರಗೊಳ್ಳಬೇಕಾದ ಅವಶ್ಯಕತೆ ಇರುವ ಕಾರಣ ತುಟಿಯ ಹೊರಚರ್ಮ ಅತಿ ಹೆಚ್ಚು ವಿಸ್ತಾರ ಹೊಂದಿದ್ದು ಸಾಮಾನ್ಯ ಸ್ಥಿತಿಯಲ್ಲಿ ನೆರಿಗೆಯಾಗಿರುತ್ತದೆ ಹಾಗೂ ಅತಿ ತೆಳುವೂ ಆಗಿರುತ್ತದೆ. ಅಲ್ಲದೇ ತುಟಿಗಳನ್ನು ಮುಚ್ಚಿಕೊಳ್ಳುವುದು ಹೆಚ್ಚೂ ಕಡಿಮೆ ಅಸಾಧ್ಯವಾದುದರಿಂದ ಶೀತಾಘಾತದ ಪ್ರಭಾವಕ್ಕೆ ಅತಿ ಸುಲಭವಾಗಿ ಒಳಗಾಗುತ್ತದೆ. ಒಂದು ವೇಳೆ ತುಟಿಗಳಿಗೆ ಹೆಚ್ಚು ಆಘಾತ ಎದುರಾಗಿದ್ದರೆ ಹೀಗೆ ಮಾಡಿ: * ಅತಿ ಹೆಚ್ಚು ನೀರು ಕುಡಿಯಿರಿ * ಬಿಸಿ ಆಹಾರ/ ಪಾನೀಯಗಳನ್ನು ಸೇವಿಸದಿರಿ * ಖಾರದ ಆಹಾರಗಳನ್ನೂ ಸೇವಿಸದಿರಿ. * ಒಂದು ವೇಳೆ ತುಟಿಗಳ ಚರ್ಮ ಪಕಳೆಯೇಳುತ್ತಿದ್ದರೆ, ಇದನ್ನು ಸರ್ವಥಾ ಕೀಳಲು ಯತ್ನಿಸದಿರಿ. ಇವು ತಾವಾಗಿಯೇ ಉದುರಲಿ ತುಟಿಗೆ ಹಚ್ಚುವ ತೇವಕಾರಕವನ್ನು * ಸದಾ ಬಳಿಯೇ ಇರಿಸಿ ಆಗಾಗ ಹಚ್ಚಿಕೊಳ್ಳುತ್ತಾ ಇರಿ. ಹೆಚ್ಚಿನ ರಕ್ಷಣೆಗಾಗಿ ಎಮೋಲ್ಲಿಯೆಂಟ್ ಕ್ರೀಮ್ ಅಥವಾ ವ್ಯಾಸೆಲಿನ್ ಹಚ್ಚಿಕೊಳ್ಳಿ. * ನಿಮ್ಮ ಲಿಪ್ ಬಾಮ್ 15 ಎಸ್ಪಿಎಫ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ.
ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಶೀತಾಘಾತದಿಂದ ತಡೆಯಲು ಅತ್ಯುತ್ತಮ ಮಾರ್ಗವೆಂದರೆ ಹೊರಗೆ ಹೋಗದೇ ಇರುವುದು, ಆದರೆ ಇದು ಸಾಧ್ಯವಲ್ಲದ ವಿಷಯ. ಹಾಗಾಗಿ, ಶೀತಲ ಮಾರುತದ ಸಮಯದಲ್ಲಿ ಹೊರಹೋಗಬೇಕಾದಾಗ ಈ ಕ್ರಮಗಳನ್ನು ಅನುಸರಿಸಿ: * ನಿಮ್ಮ ಮುಖವನ್ನು ಸ್ಕಾರ್ಫ್ ನಿಂದ ಮುಚ್ಚಿಕೊಳ್ಳಿ * ತಂಪು ಕನ್ನಡಕ ಧರಿಸಿ * ಟೋಪಿ ಮತ್ತು ಕೈಗವಸುಗಳನ್ನು ಬಳಸಿ * ಉದ್ದನೆಯ ತೋಳಿರುವ ಅಂಗಿ ಮತ್ತು ಪ್ಯಾಂಟ್ ಧರಿಸಿ * ಎರಡು ಅಥವಾ ಹೆಚ್ಚಿನ ಉಡುಪುಗಳನ್ನು ತೊಟ್ಟು ಬೆಚ್ಚಗಿರಿ * ಶೀತಾಘಾತ ಉಂಟಾಗುವ ಸ್ಥಿತಿಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ, ನೀವು ಯಾವಾಗಲೂ ಸನ್ಸ್ಕ್ರೀನ್ ಧರಿಸಬೇಕು. ಕನಿಷ್ಠ 30 ಎಸ್ಪಿಎಫ್ ಹೊಂದಿರುವ ವಿಶಾಲ-ಸ್ಪೆಕ್ಟ್ರಮ್ ಇರುವ ಉತ್ಪನ್ನವನ್ನೇ ಆಯ್ದುಕೊಳ್ಳಿ. ಶೀತಾಘಾತದ ಹಿಂದಿನ ವಿದ್ಯಮಾನಗಳು ಸುಮಾರು ಒಂದು ಶತಮಾನದಿಂದ ಚರ್ಮದ ತಜ್ಞರ ನಡುವೆ ಚರ್ಚೆಗೆ ಕಾರಣವಾಗಿವೆ, ಆದರೆ ಒಂದು ವಿಷಯ ಖಚಿತವಾಗಿದೆ: ಶೀತ ಮತ್ತು ಶುಷ್ಕ ದಿನದಂದು ಸಹ ಹೊರಗಡೆ ಇರುವುದು ನಿಮ್ಮ ಚರ್ಮವನ್ನು ಸುಡಲು ಕಾರಣವಾಗಬಹುದು. ಪ್ರತಿದಿನ ನಿಮ್ಮ ಚರ್ಮವನ್ನು ಸೂರ್ಯ ಮತ್ತು ಇತರ ಅಂಶಗಳಿಂದ ರಕ್ಷಿಸುವುದು ಮುಖ್ಯ. ಕೆಲವು ದಿನಗಳ ನಂತರ ಶೀತಾಘಾತ ಅಥವಾ ಬಿಸಿಲಿನ ಲಕ್ಷಣಗಳು ಮುಂದುವರಿದರೆ ಅಥವಾ ಅವು ಉಲ್ಬಣಗೊಂಡರೆ ನಿಮ್ಮ ವೈದ್ಯರನ್ನು ಭೇಟಿ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…