ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…