News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

55

ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್‍ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್‍ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…