News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

59

ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್‍ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್‍ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.