News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

55

ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್‍ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್‍ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖತರ್ನಾಕ್ ಕಳ್ಳರನ್ನು ಬಂಧಿಸಿ 5 ಲಕ್ಷ ಮೌಲ್ಯದ 14 ಬೈಕ್‍ಗಳನ್ನು ವಶಕ್ಕೆ ಪಡೆದುಕೊಂಡ ಕ್ಯಾತಸಂದ್ರ ಪೊಲೀಸರು

      ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್‍ಬೈಕ್‍ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…