ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ.

ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದರು.

ರಿಸ್ಟೊ ಮಟಿಲಾ ಮತ್ತು ಅವರ ಪತ್ನಿ ಹೈಲುಟೊ ದ್ವೀಪದ ಮಾರ್ಜನಿಯೆಮಿ ಬೀಚಿನಲ್ಲಿ ನಡೆದುಕೊಂಡು ಹೋಗುವಾಗ ಇಂತಹ ದೃಶ್ಯವನ್ನು ಕಂಡಿದ್ದರು. ತಕ್ಷಣ ಇವರು ಈ ಸೊಬಗಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಬೇರೆ ಗಾತ್ರದ ಹಿಮದುಂಡೆಗಳು ಇಲ್ಲಿ ಬಿದ್ದು ಸೊಬಗಿನ ಲೋಕವನ್ನು ಸೃಷ್ಟಿಸಿದ್ದವು. ಮೊಟ್ಟೆ ಗಾತ್ರದಿಂದ ಹಿಡಿದು ಫುಟ್ಬಾಲ್ ಗಾತ್ರದ ಹಿಮದ ಚೆಂಡುಗಳು ಇಲ್ಲಿ ಜನರಿಗೆ ಕಾಣಸಿಕ್ಕಿದ್ದವು.
ಇದು ಬಲು ಅಪರೂಪದ ವಿದ್ಯಮಾನ. ವಾತಾವರಣದ ಸ್ಥಿತಿ ತುಂಬಾ ಚೆನ್ನಾಗಿದ್ದರೆ ಮಾತ್ರ ವರ್ಷದಲ್ಲಿ ಒಂದು ಸಲ ಇಂತಹ ದೃಶ್ಯವನ್ನು ನಾವು ಕಾಣಬಹುದು ಎಂಬುದು ಫಿನ್ನಿಷ್ ಹವಾಮಾನ ಸಂಸ್ಥೆಯ ಹಿಮ ತಜ್ಞ ಜೌನಿ ವೈನಿಯೋ ಅವರ ಅಭಿಮತ. ಸರಿಯಾದ ಪ್ರಮಾಣದ ಗಾಳಿಯ ಉಷ್ಣತೆ (ಶೂನ್ಯಕ್ಕಿಂತ ಕಡಿಮೆ, ಆದರೆ ಸ್ವಲ್ಪ ಮಾತ್ರ), ಸರಿಯಾದ ನೀರಿನ ತಾಪಮಾನ, ಆಳವಿಲ್ಲದ ಮತ್ತು ಅಲ್ಪ ಪ್ರಮಾಣದ ಇಳಿಜಾರಿನಂತಿರುವ ಮರಳಿನ ತೀರ ಹಾಗೂ ಶಾಂತ ಅಲೆಗಳಿದ್ದರೆ ಈ ಹಿಮದ ಮೊಟ್ಟೆಗಳು ಗೋಚರಿಸುತ್ತವೆ’ ಎಂದು ಇವರು ಹೇಳಿದ್ದಾರೆ.

ಸಮುದ್ರದ ನೀರಿನ ಮೇಲ್ಮೈನಲ್ಲಿ ಹಿಮ ರೂಪುಗೊಳ್ಳುವಾಗ ಸಣ್ಣ ಚೆಂಡಿನ ರೂಪ ತಾಳುತ್ತವೆ. ಈ ಮೊಟ್ಟೆಯಾಕಾರದ ಹಿಮ ಅಲೆಗಳೊಂದಿಗೆ ಸಾಗಿ ದಡದಲ್ಲಿ ಜಮಾಗೊಳ್ಳುತ್ತದೆ ಎಂದು ಇಲಿನಾಯ್ಸ್ ಸ್ಟೇಟ್ ಯೂನಿವರ್ಸಿಟಿಯ ಭೌಗೋಳಿಕ ಭೂವಿಜ್ಞಾನ ಪ್ರಾಧ್ಯಾಪಕ ಡಾ ಜೇಮ್ಸ್ ಕಾರ್ಟರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.