ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ.

ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದರು.

ರಿಸ್ಟೊ ಮಟಿಲಾ ಮತ್ತು ಅವರ ಪತ್ನಿ ಹೈಲುಟೊ ದ್ವೀಪದ ಮಾರ್ಜನಿಯೆಮಿ ಬೀಚಿನಲ್ಲಿ ನಡೆದುಕೊಂಡು ಹೋಗುವಾಗ ಇಂತಹ ದೃಶ್ಯವನ್ನು ಕಂಡಿದ್ದರು. ತಕ್ಷಣ ಇವರು ಈ ಸೊಬಗಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಬೇರೆ ಗಾತ್ರದ ಹಿಮದುಂಡೆಗಳು ಇಲ್ಲಿ ಬಿದ್ದು ಸೊಬಗಿನ ಲೋಕವನ್ನು ಸೃಷ್ಟಿಸಿದ್ದವು. ಮೊಟ್ಟೆ ಗಾತ್ರದಿಂದ ಹಿಡಿದು ಫುಟ್ಬಾಲ್ ಗಾತ್ರದ ಹಿಮದ ಚೆಂಡುಗಳು ಇಲ್ಲಿ ಜನರಿಗೆ ಕಾಣಸಿಕ್ಕಿದ್ದವು.
ಇದು ಬಲು ಅಪರೂಪದ ವಿದ್ಯಮಾನ. ವಾತಾವರಣದ ಸ್ಥಿತಿ ತುಂಬಾ ಚೆನ್ನಾಗಿದ್ದರೆ ಮಾತ್ರ ವರ್ಷದಲ್ಲಿ ಒಂದು ಸಲ ಇಂತಹ ದೃಶ್ಯವನ್ನು ನಾವು ಕಾಣಬಹುದು ಎಂಬುದು ಫಿನ್ನಿಷ್ ಹವಾಮಾನ ಸಂಸ್ಥೆಯ ಹಿಮ ತಜ್ಞ ಜೌನಿ ವೈನಿಯೋ ಅವರ ಅಭಿಮತ. ಸರಿಯಾದ ಪ್ರಮಾಣದ ಗಾಳಿಯ ಉಷ್ಣತೆ (ಶೂನ್ಯಕ್ಕಿಂತ ಕಡಿಮೆ, ಆದರೆ ಸ್ವಲ್ಪ ಮಾತ್ರ), ಸರಿಯಾದ ನೀರಿನ ತಾಪಮಾನ, ಆಳವಿಲ್ಲದ ಮತ್ತು ಅಲ್ಪ ಪ್ರಮಾಣದ ಇಳಿಜಾರಿನಂತಿರುವ ಮರಳಿನ ತೀರ ಹಾಗೂ ಶಾಂತ ಅಲೆಗಳಿದ್ದರೆ ಈ ಹಿಮದ ಮೊಟ್ಟೆಗಳು ಗೋಚರಿಸುತ್ತವೆ’ ಎಂದು ಇವರು ಹೇಳಿದ್ದಾರೆ.

ಸಮುದ್ರದ ನೀರಿನ ಮೇಲ್ಮೈನಲ್ಲಿ ಹಿಮ ರೂಪುಗೊಳ್ಳುವಾಗ ಸಣ್ಣ ಚೆಂಡಿನ ರೂಪ ತಾಳುತ್ತವೆ. ಈ ಮೊಟ್ಟೆಯಾಕಾರದ ಹಿಮ ಅಲೆಗಳೊಂದಿಗೆ ಸಾಗಿ ದಡದಲ್ಲಿ ಜಮಾಗೊಳ್ಳುತ್ತದೆ ಎಂದು ಇಲಿನಾಯ್ಸ್ ಸ್ಟೇಟ್ ಯೂನಿವರ್ಸಿಟಿಯ ಭೌಗೋಳಿಕ ಭೂವಿಜ್ಞಾನ ಪ್ರಾಧ್ಯಾಪಕ ಡಾ ಜೇಮ್ಸ್ ಕಾರ್ಟರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…