ಸುದ್ದಿ, ಸ್ಪೂರ್ತಿ

ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

59

ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್‍ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್‍ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….