ಸುದ್ದಿ, ಸ್ಪೂರ್ತಿ

ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

59

ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್‍ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್‍ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…