ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…