ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ ಮಾಡುತ್ತಿರಬಹುದು. ದುಡ್ಡು ಇದ್ದರೆ ಏನಂತೆ ನಾವು ಶುದ್ಧ ಗಾಳಿ ಹಾಗೂ ನೀರಿಗಾಗಿ ಹಂಬಲಿಸುತ್ತೇವೆ. ಈ ನಡುವೆ ಮನೆಯೊಳಗೆ ಬಿಸಿಲು ಕೂಡ ಬರುವುದಿಲ್ಲ. ಹೀಗಿರುವಾಗ ಎಷ್ಟು ಸಂಪಾದನೆ ಮಾಡಿದರೂ ಪ್ರಯೋಜನ ಏನು? ಈ ಕಾರಣದಿಂದಾಗಿ ನಾವು ನಮ್ಮ ಮಗನಿಗೆ ಬೇರೆ ಜೀವನ ನೀಡಲು ನಿರ್ಧರಿಸಿ ಇಂದೋರ್ ನಲ್ಲಿ ಜಮೀನು ಖರೀದಿಸಿದ್ದೇವೆ ಎಂದು ದಂಪತಿ ತಮ್ಮ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ಈ ಬದಲಾವಣೆಯನ್ನು ಮಗ ಹೇಗೆ ಎದುರಿಸುತ್ತಾನೆ ಎಂದು ರಾಜೇಂದ್ರ ಹಾಗೂ ಚಂಚಲ್ ಚಿಂತಿಸುತ್ತಿದ್ದರು. ಆದರೆ ಗುರುಭಕ್ಷ್ ಈ ಹೊಸ ಜೀವನದಿಂದ ಖುಷಿಯಾಗಿದ್ದ. ಈಗ ಸಾವಯವ ಕೃಷಿಯಿಂದ ಹಿಡಿದು ಎಲ್ಲದರಲ್ಲೂ ಆತ ತನ್ನ ತಾಯಿಗೆ ಸಹಾಯ ಮಾಡುತ್ತಿದ್ದಾನೆ. ಊರಿನಲ್ಲಿ ಆತನಿಗೆ ಸಾಕಷ್ಟು ಸ್ನೇಹಿತರು ಪರಿಚಯವಾಗಿದ್ದು, ಗುರುಭಕ್ಷ್ ಅವರಿಗೆ ಸೋಲಾರ್ ಕುಕ್ಕಿಂಗ್ ಹಾಗೂ ಕೃಷಿ ವಿಧಾನಗಳನ್ನು ಕಲಿಸುತ್ತಾನೆ. ಜೊತೆ ಆಟವಾಡುವಾಗ ಅವರಿಂದಲೂ ಗುರುಭಕ್ಷ್ ಕಲಿಯುತ್ತಿದ್ದಾನೆ. ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಜೀವನಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುತ್ತಾರೆ. ಆದರೆ ಈ ಹಣವನ್ನು ಸಂಪಾದಿಸುವಾಗ ಅವರು ತಮ್ಮ ಮಕ್ಕಳಿಗೆ ಸಮಯವನ್ನು ನೀಡಲು ಸಾಧ್ಯವಾಗುತ್ತಿಲ್ಲ.

2016ರಲ್ಲಿ ಚಂಚಲ್ 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಕರು ಹಾಗೂ ಸ್ನೇಹಿತರು “ಇದು ತಪ್ಪು ನಿರ್ಧಾರ” ಎಂದು ಹೇಳಿದರು. ಆದರೆ ಮಗನಿಗೆ ಆರೋಗ್ಯಕರ ಮತ್ತು ಸ್ವಚ್ಛ ಜೀವನವನ್ನು ನೀಡಲು ನಾನು ತೆಗೆದುಕೊಂಡ ನಿರ್ಧಾರ ಸರಿ ಎಂದು ಅವರಿಗೆ ಹೇಳಿದೆ ಎಂಬುದಾಗಿ ಚಂಚಲ್ ಹೇಳಿದರು. 2017ರಲ್ಲಿ ಚಂಚಲ್ ತಮ್ಮ ಮಗನ ಜೊತೆ ಇಂಧೋರ್ ಶಿಫ್ಟ್ ಆಗಿದ್ದಾರೆ. ಅಲ್ಲಿ ಸಾವಯವ ಕೃಷಿಯಲ್ಲಿ ಪದ್ಮಶ್ರೀ ಡಾ. ಜಾನಕ್ ಪಾಲ್ಟಾ ಅವರಿಂದ ತರಬೇತಿ ಪಡೆದಿದ್ದಾರೆ. ಜೊತೆಗೆ ಸೋಲಾರ್ ಕುಕ್ಕಿಂಗ್, ಸೋಲಾರ್ ಡ್ರೈಯಿಂಗ್ ಕಲಿತಿದ್ದಾರೆ.

ನಾವು ಯಾವಾಗಲೂ ನಮ್ಮ ಮಗನಿಗೆ ನೀನು ಯಾವುದೇ ರೇಸ್ನಲ್ಲಿ ಇಲ್ಲ. ನೀನು ಯಾರಿಂದಲೂ ಮುಂದೆ ಅಥವಾ ಹಿಂದಕ್ಕೆ ನಡೆಯಬೇಕಿಲ್ಲ. ಕೇವಲ ತನ್ನ ವೇಗದಲ್ಲಿ ನಡೆಯಬೇಕು ಎಂದು ಹೇಳುತ್ತಿರುತ್ತೇವೆ ಅಂತಾ ರಾಜೇಂದ್ರ ಹಾಗೂ ಚಂಚಲ್ ತಿಳಿಸಿದ್ದಾರೆ. ರಾಜೇಂದ್ರ ಹಾಗೂ ಚಂಚಲ್ ಅವರ ಮನೆಯಲ್ಲಿ ಸೋಲಾರ್ ಕುಕ್ಕಿಂಗ್ ಮೂಲಕ ಅಡುಗೆ ಮಾಡಲಾಗುತ್ತಿದೆ. ಅಲ್ಲದೆ ತಮ್ಮ ಜಮೀನಿನಲ್ಲಿ ಸಾವಯವ ರೀತಿಯಲ್ಲಿ ಬೆಳೆದ ತರಕಾರಿಗಳನ್ನು ಅಡುಗೆ ಮಾಡಲು ಉಪಯೋಗಿಸುತ್ತಾರೆ. ಚಂಚಲ್ ಒಬ್ಬರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ. ರಾಜೇಂದ್ರ ಉದ್ಯೋಗದಿಂದಾಗಿ ಇಂದೋರ್ ಮನೆಯಲ್ಲಿ ಹೆಚ್ಚು ಸಮಯ ಇರುವುದಿಲ್ಲ. ಪತಿ ಮನೆಯಲ್ಲಿ ಇಲ್ಲದೇ ಇದ್ದರೂ ಚಂಚಲ್, ಗುರುಭಕ್ಷ್ಗೆ ವಿದ್ಯಾಭ್ಯಾಸದ ಜೊತೆಗೆ ಭವಿಷ್ಯದ ಮಾದರಿ ರೈತನಾಗಲು ಕೃಷಿ ತರಬೇತಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…