ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…