News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

84

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…