ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

79

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…