News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

80

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…