ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

65

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…