News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

80

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.