ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.
ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.
ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.
ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…