ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.
ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.
ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.
ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.
ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.
ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.
ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.
ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.
ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.
ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.
ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…