ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.
ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.
ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.
ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.
ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.
ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.
ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.
ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.
ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.
ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.
ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…