ಆರೋಗ್ಯ

ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

135

ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.

ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್‌ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್‌ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್‌ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್‌ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಆರೋಗ್ಯ

    ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

    ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…