ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.