News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

145

ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.

ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್‌ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್‌ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್‌ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್‌ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ದೇವರು-ಧರ್ಮ

    ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

    ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಸುದ್ದಿ

    ರಾಮ..ರಾಮ..ಮತ್ತೆ ಭಗವಾನ್ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಭಕ್ತರ ಕೆಂಗಣ್ಣಿಗೆ ಗುರಿಯಾದ ಪ್ರೊಫೆಸರ್ ಭಗವಾನ್..!

    ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್‍ರವರು…