ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.