ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…