News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

57

ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್‍ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…