ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….