ಸುದ್ದಿ

ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

169

ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ.


ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ದೊಡ್ಡ ಪ್ರಮಾದಕಂಡುಬಂದಿತ್ತು.

ಮೊದಲವರ್ಷದ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕ ಗಳಿಸಿದ್ದ ವಿದ್ಯಾರ್ಥಿಗಳು ಎರಡನೇ ವರ್ಷದಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದರು. ವಿವಿಧ ವಿಷಯಗಳಲ್ಲಿ ಕೇವಲ ಸೊನ್ನೆ, ಒಂದು ಹಾಗೂ ಎರಡುಅಂಕಗಳನ್ನು ಮಾತ್ರ ಕೊಡಲಾಗಿದೆ ಎಂದು ಸಾಕಷ್ಟು ದೂರುಗಳನ್ನು ವಿದ್ಯಾರ್ಥಿಗಳು ಸಲ್ಲಿಸಿದ್ದರು.ಈರೀತಿಯ ಪ್ರಕರಣಗಳಿಂದ ಇನ್ನುಳಿದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರಲ್ಲಿ ತಳಮಳ ಉಂಟುಮಾಡಿದೆ.ಪರೀಕ್ಷೆಯಲ್ಲಿ ಫೇಲ್​ ಆಗುವುದರಿಂದ ಜೀವನವೇ ಮುಗಿದುಹೋಯಿತು ಎಂಬುದಕ್ಕೆ ಅರ್ಥವಿಲ್ಲ. ಹೀಗಾಗಿವಿದ್ಯಾರ್ಥಿಗಳ ಆತ್ಮಹತ್ಯೆಯ ಯೋಚನೆ ಮಾಡಬೇಡಿ ಎಂದು ಕೆಸಿಆರ್​ ಮನವಿ ಮಾಡಿಕೊಂಡಿದ್ದಾರೆ.

ಈ ವರ್ಷ 4,09,133 ವಿದ್ಯಾರ್ಥಿಗಳು ನಿಯಮಿತ ಪದ್ದತಿಯಂತೆ ಮೊದಲ ವರ್ಷದ ಪರೀಕ್ಷೆಯನ್ನು ಎದುರಿಸಿದ್ದು, ಅದರಲ್ಲಿ 2,47,407 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ವರ್ಷದಲ್ಲಿ 3,82,534 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 2,47,555 ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದಾರೆ. ಪರೀಕ್ಷಾ ಫಲಿತಾಂಶದಲ್ಲಿನ ಪ್ರಮಾದದ ತನಿಖೆಗಾಗಿ ಈಗಾಗಲೇ ಸಮಿತಿಯೊಂದನ್ನು ರಚಿಸಿದ್ದು, ಸಮಿತಿ ತನ್ನ ವರದಿಯನ್ನೂ ಕೂಡ ಸಲ್ಲಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…