News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

107

ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್‍ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.