News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

106

ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್‍ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.