ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ. ಇದೀಗ ಮತ್ತೊಂದು ಬಹುಭಾಷಾ ಸಿನಿಮಾ ಅಷ್ಟೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗುತ್ತಿದ್ದು, ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿರುವ ಪೈಲ್ವಾನ್ ಚಿತ್ರದ ಮೇಲೆ ದಿನದಿಂದ ದಿನಕ್ಕೆ ನಿರೀಕ್ಷೆಗಳು ದುಪ್ಪಟ್ಟಾಗುತ್ತಿವೆ.
ಹಾಲಿ ಸುದ್ದಿಮೂಲಗಳ ಅನ್ವಯ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ನೂತನ ದಾಖಲೆಯೊಂದಕ್ಕೆ ಪೈಲ್ವಾನ್ ಸಜ್ಜಾಗಿದ್ದು, ಪೈಲ್ವಾನ್ ಚಿತ್ರದ ಟಿವಿ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟವಾಗುವ ನಿರೀಕ್ಷೆ ಇದೆ. ಹೌದು.. ಪೈಲ್ವಾನ್ ಚಿತ್ರವನ್ನು ಕಿರುತೆರೆಯಲ್ಲಿ ಪ್ರಸಾರ ಮಾಡಲು ದೇಶದ ದೊಡ್ಡ ದೊಡ್ಡ ಸಂಸ್ಥೆಗಳು ಆಫರ್ ನೀಡಲು ಮುಂದಾಗಿದ್ದು, ಎಲ್ಲಾ ಎಂಟು ಭಾಷೆಯಲ್ಲಿ ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪ್ರತಿಷ್ಠಿತ ಕಂಪನಿಯೊಂದು ಬರೋಬ್ಬರಿ 30 ಕೋಟಿ ಆಫರ್ ನೀಡಿದೆಯಂತೆ.
ಈ ಬಗ್ಗೆ ಸ್ವತಃ ಚಿತ್ರ ನಿರ್ದೇಶಕ ಕೃಷ್ಣ ಅವರು ಮಾಹಿತಿ ನೀಡಿದ್ದು, ಒಂದು ವೇಳೆ ಈ ಒಪ್ಪಂದ ಸಾಧ್ಯವಾಗಿದ್ದೇ ಆದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ಬೃಹತ್ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾದ ಮೊದಲ ಚಿತ್ರ ಎಂಬ ಖ್ಯಾತಿಗೆ ಪೈಲ್ವಾನ್ ಪಾತ್ರವಾಗಲಿದೆ.
ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೊಂಡಿರುವ ಕೃಷ್ಣ ಅವರು, ‘ಚಿತ್ರದ ಸ್ಯಾಟಲೈಟ್ ಹಕ್ಕುಗಳಿಗೆ ಸಂಬಂಧಿಸಿದಂತೆ ಒಂದಷ್ಟು ಆಫರ್ ಬಂದಿವೆ. ಆಲ್ ಇಂಡಿಯಾ ಟಿವಿ ಹಕ್ಕುಗಳಿಗಾಗಿ 30 ಕೋಟಿ ಆಫರ್ ಬರುತ್ತಿದೆ..
ಕನ್ನಡ ಚಿತ್ರವೊಂದಕ್ಕೆ ಇದುವರೆಗೂ ಬಂದಿರುವ ಅತಿದೊಡ್ಡ ಟಿವಿ ರೈಟ್ಸ್ ಆಫರ್ ಇದಾಗಿದೆ. ಆದರೆ ನಾವು ಇನ್ನೂ ಫಿಕ್ಸ್ ಆಗಿಲ್ಲ. ಚಿತ್ರದ ಮೇಕಿಂಗ್ ಮತ್ತು ಸೆಟ್ ಗಳನ್ನ ನೋಡಿಯೇ ಈ ರೀತಿಯ ಆಫರ್ ಗಳನ್ನ ನೀಡುತ್ತಿದ್ದಾರೆ.. ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಮೊತ್ತಕ್ಕೆ ಆಫರ್ ಬರುವ ಭರವಸೆಯಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.