ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.