ಸುದ್ದಿ

ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

445

ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್‍ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.

ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?

ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.

ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್‍ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.

ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.

ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್‍ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ವಿಸ್ಮಯ ಜಗತ್ತು

    ಭಕ್ತನೊಬ್ಬ ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರವೊಂದನ್ನು ಬರೆದಿದ್ದಾನೆ..!ಆ ಪತ್ರದಲ್ಲಿ ಏನಿತ್ತು ಗೊತ್ತಾ..?

    ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…