ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.