ಸುದ್ದಿ

ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

442

ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್‍ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.

ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?

ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.

ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್‍ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.

ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.

ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್‍ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು