ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…